ಬ್ಯಾಲಾಳು ಮತ್ತು ಬಿಳಲು

Monday, December 1st, 2008
ಬ್ಯಾಲಾಳು ಮತ್ತು ಬಿಳಲು

 

ಎಲ್ಲದಕ್ಕೂ ಒಂದು ಕೊನೆ ಇರಲೇಬೇಕು ಅಲ್ವೆ? ಕಲಿ-ಯುಗ ಅಂಕಣಕ್ಕೂ ಇಂದೇ ಕೊನೆ! ’ಉದಯವಾಣಿ’ಯಲ್ಲಿ ಕಳೆದ ಒಂದೂಕಾಲು ವರ್ಷದಿಂದ ಮೂಡಿದ ಕಲಿ-ಯುಗ ಅಂಕಣವನ್ನು ಖುಷಿಯಿಂದಲೇ ನಿಲ್ಲಿಸುತ್ತಿದ್ದೇನೆ. ಕೆಲಸ ಬಿಡುವಾಗ ಖುಷಿಪಡಿ ಎಂದ ನಾನು ನನ್ನ ಅಂಕಣ ನಿಲ್ಲಿಸುವಾಗ ಬೇಜಾರಾಗೋದು ಪಾಸಿಟಿವ್ ಬದುಕಿನ ಲಕ್ಷಣವಲ್ಲ ಅಲ್ವೆ? 
ಉದಯವಾಣಿಯಲ್ಲಿ ಬಂದ ನನ್ನ ಲೇಖನಗಳನ್ನು ಓದಿದ ಹಲವರು ನನ್ನನ್ನು ಈಗಲೂ ಬೇರೆ ಬೇರೆ ಸಂದರ್ಭಗಳಲ್ಲಿ ಸಂಪರ್ಕಿಸುತ್ತಿದ್ದಾರೆ; ಮಾಹಿತಿ ಕೇಳುತ್ತಿದ್ದಾರೆ. ಎರಡು ವಾರದ ಹಿಂದೆ ಬಂದ ನಡಹಳ್ಳಿ ಅನಂತಜ್ಜನ ಬಹುಮುಖ ಪ್ರತಿಭೆಯ ಲೇಖನವನ್ನು ಓದಿದ ಅವರ [...]

ನಾರುಟೋ ಉಝಿಮಾಕಿ, ದತ್ತೆಬಯೋ!

Monday, November 24th, 2008
ನಾರುಟೋ ಉಝಿಮಾಕಿ, ದತ್ತೆಬಯೋ!

“Art is something that endures the test of time beautifully a
nd gracefully. True art is eternal beauty”
“Eternal beauty? Master I respect you as a fellow artist, but art is something blossoms for an instant before withering away. “
“Deidara, apparently you don’t understand what true art is.”
“That would be you master”
“Eternal beauty is the only true [...]

ಮೀನಿನ ಹೆಜ್ಜೆಯಲ್ಲಿ ಪಾದರಸದ ಮುದ್ರೆ

Monday, November 24th, 2008
ಮೀನಿನ ಹೆಜ್ಜೆಯಲ್ಲಿ ಪಾದರಸದ ಮುದ್ರೆ

ಎಂಟು ವರ್ಷಗಳ ಹಿಂದಿನ ಮಾತು. ಸ್ಯಾನ್‌ಫ್ರಾನ್ಸಿಸ್ಕೋ ನಗರದ ವೈದ್ಯೆ ಡಾ. ಜೇನ್ ಹೈಟವರ್ ಎಂಬ ವೈದ್ಯೆಯ ಬಳಿ ಒಬ್ಬ ರೋಗಿ ಬಂದಳು. ತುಂಬಾ ಹೊಟ್ಟೆನೋವು ಎಂದಳು. ಜೊತೆಗೆ ವಾಂತಿ, ವಿಪರೀತ ಸುಸ್ತು, ಏಕಾಗ್ರತೆಯೇ ಇಲ್ಲ. ಆಕೆಗೆ ಏನು ಮಾಡಿದರೂ ನೋವಿನ ಮೂಲ ತಿಳಿಯಲಾಗಲಿಲ್ಲ.  ಆದೇ ವಾರ ಇನ್ನೂ ಹಲವು ರೋಗಿಗಳು ಇಂಥದ್ದೇ ಸಮಸ್ಯೆ ಹೊತ್ತು ಬಂದರು. ಎಲ್ಲರನ್ನೂ ವಿಚಾರಿಸೋ ಹೊತ್ತಿಗೆ ಡಾ. ಜೇನ್‌ಗೆ ಒಂದು ಅಂಶ ಸ್ಪಷ್ಟವಾಯಿತು: ಎಲ್ಲರೂ ಒಂದು ನಿರ್ದಿಷ್ಟ ಮೀನಿನ ರುಚಿಗೆ ಮನಸೋತವರು. ಆ [...]

ಗದಗಿನ ಪವನದ ಸದ್ಬಳಕೆಗೆ ಎಚ್ ಕೆ ಪಾಟೀಲರ ಕನಸು

Monday, November 24th, 2008
ಗದಗಿನ ಪವನದ ಸದ್ಬಳಕೆಗೆ ಎಚ್ ಕೆ ಪಾಟೀಲರ ಕನಸು

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರ ಪೈಕಿ ಕಾಂಗ್ರೆಸ್ ಪಕ್ಷದ ಧುರೀಣ, ಮಾಜಿ ಸಚಿವ ಎಚ್. ಕೆ. ಪಾಟೀಲರೂ (ಎಚ್‌ಕೆಪಿ)ಒಬ್ಬರು. ಆನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲೂ ಅವರು ಸೋತರು. ಹಲವು ಪತ್ರಿಕೆಗಳಲ್ಲಿ ಅವರ ಈ ಜೋಡಿ ಸೋಲಿನ ಬಗ್ಗೆ ವಿಮರ್ಶೆಗಳು ಪ್ರಕಟವಾದವು.
ಎರಡೂ ಸೋಲಿನಿಂದ ಎಚ್‌ಕೆಪಿ ಕಂಗೆಟ್ಟುಹೋದರು ಎಂದು ಭಾವಿಸುವುದರಲ್ಲಿ ತಪ್ಪೇನಿಲ್ಲ. ಆದರೆ ಎಚ್‌ಕೆಪಿ ಸುಮ್ಮನೆ ಕೂಡಲಿಲ್ಲ. ಚುನಾವಣೆ ಮುಗಿದಂತೆಯೇ ಮುಂಗಾರು ಮಳೆಯೂ ಕೈಕೊಟ್ಟ ಸುದ್ದಿ ಬಂತು. ಕೂಡಲೇ ಎಚ್‌ಕೆಪಿ ತಮ್ಮದೇ ಸಂಪನ್ಮೂಲ ಬಳಸಿ ಮೋಡಬಿತ್ತನೆಯ ಮೂಲಕ ಮಳೆ [...]

ವಿಶ್ವನಾಥನ್ ಆನಂದ್ ನೆನಪಿಸಿದ್ದು ನಡಹಳ್ಳಿ ಅನಂತಜ್ಜನನ್ನು!

Monday, November 24th, 2008

 
ವಿಶ್ವನಾಥನ್ ಆನಂದ್ ಮತ್ತೊಮ್ಮೆ ವಿಶ್ವ ಚದುರಂಗ (ಚೆಸ್) ಚಾಂಪಿಯನ್ ಆಗಿದ್ದಾರೆ. ಭಾರತೀಯರೇ ರೂಪಿಸಿದ ಆಟದಲ್ಲಿ ಭಾರತೀಯ ಆನಂದ್ ಮತ್ತೆ ಗೆದ್ದಿದ್ದಾರೆ, ಅದೂ ಈವರೆಗೆ ಮಹಾನ್ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಕ್ರಾಮ್ನಿಕ್ ಎದುರು! ಮ್ಯಾಚ್ ಪ್ಲೇ – ಅಂದರೆ ’ಪಂದ್ಯಾವಳಿಯಲ್ಲಿ ಕ್ರಾಮ್ನಿಕ್‌ನನ್ನು  ಆನಂದ್ ಎಂದೂ ಸೋಲಿಸಿಲ್ಲವಲ್ಲ?’ ಎಂಬ ಕಪ್ಪು ಚುಕ್ಕೆಯೊಂದನ್ನು ರಶಿಯಾ ಆಟಗಾರರು, ವಿದೇಶಿ ಕ್ರೀಡಾಳುಗಳು ಎತ್ತಿ ತೋರಿಸುತ್ತಿದ್ದರು. ಈಗ ಈ ಆರೋಪವೂ ಹುರುಳಿಲ್ಲದಂತಾಗಿದೆ. 
ಕ್ರಿಕೆಟ್ಟಿನಲ್ಲಿ ಗೆದ್ದಾಗ ಸಾವಿರಾರು ಪಟಾಕಿ ಹಚ್ಚುವ ನಾವು ಚದುರಂಗದಲ್ಲಿ ಹತ್ತಾರು ವರ್ಷಗಳಿಂದ ಗೆಲ್ಲುತ್ತ [...]

ಕ್ಯಾಸನೂರು ಕಾಡಿನಲ್ಲಿ ಮಲಗಿರುವ ಕೂಸಿಗೆ

Monday, September 15th, 2008
ಕ್ಯಾಸನೂರು ಕಾಡಿನಲ್ಲಿ ಮಲಗಿರುವ ಕೂಸಿಗೆ

ಶಿಲ್ಪಶ್ರೀ,
ಬ್ಲಾಗಿಂಗ್ ಬಗ್ಗೆ ಸ್ನಾತಕೋತ್ತರ ಪ್ರಬಂಧ ಬರೆಯಬೇಕಂದ್ರೆ ಶಿವಮೊಗ್ಗ ಶಂಕರಘಟ್ಟ ಅಂಥ ಒಳ್ಳೆಯ ಜಾಗವೇನಲ್ಲ. ಬ್ಲಾಗಿಂಗ್‌ನಂಥ ಇಂಟರ್‌ನೆಟ್ ಆಧಾರಿತ ವಿಷಯಾಭ್ಯಾಸ ಮಾಡಬೇಕಂದ್ರೆ ಬೆಂಗಳೂರಿನ ಸಂಪರ್ಕ ಇರಲೇಬೇಕು. ಕಲಿಯುವ ಜಾಗಕ್ಕೂ, ವಿಷಯಕ್ಕೂ ಸಂಬಂಧವೇ ಇರದಂಥ ಕಡೆಯಲ್ಲಿ ಇದ್ದ ನೀನು ಬ್ಲಾಗಿಂಗ್ ಬಗ್ಗೆ ಬರೆಯೋದಕ್ಕೆ ಹಒರಟು ನನಗೆ ಫೋನ್ ಮಾಡಿದಾಗ ನನಗೆ ಇನ್ನಿಲ್ಲದ ಅಚ್ಚರಿ; ಸಂತೋಷ. ಬೆಂಗಳೂರಿನ ಒಂದಷ್ಟು ಪರಿಣತರು ಬಂದು ಬ್ಲಾಗಿಂಗ್ ಬಗ್ಗೆ ಮಣಗಟ್ಟಳೆ ಭಾಷಣ ಮಾಡಿದ್ದರೂ ನಿನಗೆ ಬ್ಲಾಗಿಂಗ್ ಅರ್ಥವಾಗಿರಲಿಲ್ಲ ಎಂದು ನನಗೆ ನಿನ್ನ ಮಾತಿನ ಮೂಲಕ ಗೊತ್ತಾಯ್ತು.
ಅದಕ್ಕೇ [...]

ತದಡಿ: ಸರ್ಕಾರ, ಜನ, ನಾಯಕರು ಮಾಡಬೇಕಾದ್ದೇನು? ಇಲ್ಲಿದೆ ಕಾರ್ಯಸೂಚಿ

Monday, September 1st, 2008

ಕಳೆದ ವಾರ ಇದೇ ಅಂಕಣದಲ್ಲಿ ತದಡಿ ಯೋಜನೆಯ ಬಗ್ಗೆ ಲೇಖನ ಬಂದ ದಿನವೇ ನಾನು ತದಡಿಯಲ್ಲಿದ್ದೆ. ಅದಾಗಲೇ ತದಡಿಯ ಬಗೆಗಿನ ಎಲ್ಲ ಮಾಹಿತಿಯನ್ನೂ ಅಂತರಜಾಲದಲ್ಲಿ ಪಾತಾಳಗರಡಿ ಹಾಕಿ ಹುಡುಕಿ ತೆಗೆದು ಓದಿದ್ದೆ. ತದಡಿಯಲ್ಲಿ ಯೋಜನೆಯ ಪರ, ವಿರೋಧ ಇರುವ ಕೆಲವರನ್ನು ಭೇಟಿಯಾದೆ. ಪತ್ರಕರ್ತ ಮಿತ್ರರ ಜೊತೆ ಚರ್ಚಿಸಿದೆ. ಮುಖ್ಯವಾಗಿ ತದಡಿಯ ಈಗಿನ ವಿವಾದಿತ ಅಭಿವೃದ್ಧಿ ಮೀಸಲು ಜಾಗವನ್ನೂ ನೋಡಿದೆ. ಅದರ ಮೇಲೆ ಓಡಾಡಲಾಗಲಿಲ್ಲ; ಯಾಕೆಂದರೆ ಅದೆಲ್ಲವೂ ಗಜನಿ ಭೂಮಿ. ನೀರು ಏರುತ್ತ, ಇಳಿಯುತ್ತ ಹೋಗುತ್ತದೆ. ನುಸಿಕೋಟೆಯ ಜನರು [...]

ಅಂಕಣಗಳು

ಹುದುಗಿದ್ದನ್ನು ಹುಡುಕಿ!

ಬನ್ನಿ, ಮಾತಾಡೋಣ!

ನೋಂದಾಯಿಸಿಕೊಳ್ಳಿ!

ಮಿತ್ರಮಾಧ್ಯಮದಲ್ಲಿ ಹೊಸ ಬರಹಗಳು ಪ್ರಕಟವಾದ ಬಗ್ಗೆ ತಿಳಿಯಲು ಇಲ್ಲಿ ನೋಂದಾಯಿಸಿ. ನಿಮ್ಮ ನೋಂದಾವಣೆ ಖಚಿತಪಡಿಸಿ ಒಂದು ಇ-ಮೈಲ್ ಕಳಿಸುತ್ತೇನೆ; ಗಮನಿಸಿ.

ಹೆಸರು
ಇಮೇಲ್