ಅಪಘಾತ ಎಂದರೇನು? ಬಗೆಗಳು, ಕಾರಣಗಳು, ಪರಿಣಾಮಗಳು

Friday, September 3rd, 2010
ಅಪಘಾತ ಎಂದರೇನು? ಬಗೆಗಳು, ಕಾರಣಗಳು, ಪರಿಣಾಮಗಳು

ಅಪಘಾತ ಎಂದರೆ ಅನಿರೀಕ್ಷಿತವಾಗಿ, ಯಾವುದೇ ಪೂರ್ವಯೋಜನೆಯಿಲ್ಲದೆ ನಡೆಯುವ, ದುಃಖದ ಸನ್ನಿವೇಶವನ್ನು ಉಂಟುಮಾಡುವ, ತಡೆಯಲು ಸಾಧ್ಯವಾಗದ ಮತ್ತು ಗಾಯಗಳಿಗೆ ಕಾರಣವಾಗುವ ದುರ್ಘಟನೆಯಾಗಿದೆ. ಅಪಘಾತಕ್ಕೆ ಒಳಗಾದವರು ಉದ್ದೇಶಪೂರ್ವಕವಾಗಿ ವರ್ತಿಸಿರುವುದಿಲ್ಲ. ಪ್ರತಿದಿನವೂ ಒಂದಲ್ಲ ಒಂದು ಕಡೆ ಮನುಷ್ಯರ ಮತ್ತು ಯಂತ್ರಗಳ ನಿಯಂತ್ರಣ ತಪ್ಪಿ ಅಪಘಾತಗಳು ನಡೆಯುತ್ತಲೇ ಇರುತ್ತವೆ. ನಾಗರಿಕತೆಯು ಬೆಳೆದಂತೆ, ಜನಸಂಖ್ಯೆ ಹೆಚ್ಚಿದಂತೆ, ಅವಸರದ ಬದುಕಿನಿಂದಾಗಿ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದೆ.

National anthem band music mp3

Friday, December 5th, 2008

here is the national anthem for listening. I dont know the source but this is the official one. The school children are often asked to listen it and follow in t heir bands. So, I have given the file here.
india-national-anthem-band-music

ಪುಸ್ತಕ ಭಂಡಾರಗಳು

Thursday, December 4th, 2008

ಪುಸ್ತಕಗಳು ಎಂದಕೂಡಲೇ ಪುಟ್ಟ ಮಕ್ಕಳು ಕಣ್ಣು ಹಾಯಿಸುತ್ತಾರೆ. ಮನೆಯ ಹೆಣ್ಣುಮಕ್ಕಳು ತಮಗೆ ಬೇಕಾದ ಮಾಹಿತಿ ಇದೆಯೆ ಎಂದು ಪುಟ ತಿರುಗಿಸುತ್ತಾರೆ. ಹಿರಿಯರು ಕಾಲಕ್ಷೇಪಕ್ಕೆಂದು ಹಲವು ಪುಸ್ತಕಗಳನ್ನು ಸಂಗ್ರಹಿಸುತ್ತಾರೆ. ಇಂಥ ನೂರಾರು, ಸಾವಿರಾರು ಪುಸ್ತಕಗಳು ಇದ್ದರೆ? ಹಾಗೆ ವಿವಿಧ ವಿಷಯಗಳ ಮೇಲೆ ನೂರಾರು ಪುಸ್ತಕಗಳನ್ನು ಸಂಗ್ರಹಿಸಿ ಸಾರ್ವಜನಿಕರಿಗಾಗಿ ಮುಕ್ತವಾಗಿರುವ ವ್ಯವಸ್ಥೆಯ್ನೇ ಪುಸ್ತಕ ಭಂಡಾರ ಎಂದು ಕರೆಯುತ್ತಾರೆ. 
ಪುಸ್ತಕ ಭಂಡಾರ ಎಂದರೆ eನದಭಂಡಾರವೇ ಎನ್ನಬಹುದು. ಒಂದೇ ಸ್ಥಳದಲ್ಲಿ ಕುಳಿತು ಜಗತ್ತಿನ ಯಾವುದೇ ಮೂಲೆಯ ಮಾಹಿತಿಯನ್ನು, ಕಥೆಯನ್ನು, ಸ್ಥಳವಿಶೇಷವನ್ನು ತಿಳಿದುಕೊಳ್ಳುವ, ಅನುಭವಿಸುವ ಸಾಧ್ಯತೆ [...]

ಅರ್ಥವಿಲ್ಲದ ಓದು ವ್ಯರ್ಥ

Wednesday, December 3rd, 2008

ವಿದ್ಯಾರ್ಥಿಗಳು ಪರೀಕ್ಷೆಗಾಗಿ ಓದುತ್ತಾರೆ. ಆದರೆ ಈ ಓದಿನಲ್ಲಿ ಎದುರಾಗುವ ನೂರಾರು ವಿಷಯಗಳನ್ನು ಅವರು ಅರ್ಥ ಮಾಡಿಕೊಂಡಿದ್ದಾರೆಯೇ ಎನ್ನುವುದು ಮುಖ್ಯ. ಗಣಿತದ ಒಂದು ಸಮೀಕರಣವನ್ನು ಅರ್ಥ ಮಾಡಿಕೊಳ್ಳದೇ ಹೋದರೆ  ಅದರ ಮೇಲೆ ಕೇಳುವ ಪ್ರಶ್ನೆಗಳಿಗೆ ಆರಾಮಾಗಿ ಉತ್ತರಿಸಲು ಸಾಧ್ಯವಾಗುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳು ಸಮಸ್ಯೆ ಹಾಗೂ ಪರಿಹಾರಗಳನ್ನು ಬಾಯಿಪಾಠ ಮಾಡಿಬೇಕಾಗುತ್ತದೆ. ಇದರಿಂದ ಏನೂ ಪ್ರಯೋಜನವಿಲ್ಲ. ಆದ್ದರಿಂದ ಅರ್ಥ ಮಾಡಿಕೊಳ್ಳದೇ ಓದುವುದು ಯಾವ ಪ್ರಯೋಜನಕ್ಕೂ ಬಾರದು ಎನ್ನುವುದು ಈ ಗಾದೆ ಮಾತಿನ ತಾತ್ಪರ್ಯ. 
ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಅರ್ಥ ಮಾಡಿಕೊಂಡರೆ ಅವರಿಗೆ ಮುಂದಿನ [...]

ಹಿತ್ತಲ ಗಿಡ ಮದ್ದಲ್ಲ

Monday, December 1st, 2008

ಯಾವುದೋ ರೋಗಕ್ಕೆ ಕಂಡಕಂಡ ಗಿಡದ ರಸವಾಗಲೀ, ಬೇರಾಗಲೀ ಔಷಧವಾಗಲಾರದು ಎಂಬುದು ಈ ನಾಣ್ಣುಡಿಯ ಸ್ಥೂಲ ಅರ್ಥ. ಆದರೆ ಇದರ ಒಳಾರ್ಥವೇ ಬೇರೆ. ನಾವು ಯಾವುದೇ ಸಮಸ್ಯೆಗೆ ಪರಿಹಾರ ಹುಡುಕುವಾಗ ತುರ್ತು ಉಪಾಯಗಳನ್ನೇ ಹುಡುಕುತ್ತೇವೆ. ಉದಾಹರಣೆಗೆ  ಬಿದ್ದು ಗಾಯವಾದರೆ ಕೂಡಲೇ ಅದನ್ನು ತಣ್ಣೀರಿನಿಂದ ತೊಳೆದು ಅದಕ್ಕೆ ಪೌಡರ್ ಹಚ್ಚುತ್ತೇವೆ. ಆದರೆ ಹೀಗೆ ತಕ್ಷಣ ಕೈಗೆ ಸಿಕ್ಕಿದ ವಸ್ತುವನ್ನು ಬಳಸುವುದು ಕೆಲವೊಮ್ಮೆ ಅಪಾಯಕಾರಿಯಾಗುತ್ತದೆ. ಗಾಯಕ್ಕೆ ಸೂಕ್ತವಾಗ ಔಷಧವನ್ನು ಹಚ್ಚುವುದೇ ಸರಿಯಾದ ಮಾರ್ಗ. 
ಹಾಗೆಯೇ ಬದುಕಿನಲ್ಲಿ ನಾವು ಎದುರಿಸುವ ಹಲವು ಸಮಸ್ಯೆಗಳಿಗೆ  ನಾವು [...]

ಜಲ ಸಂರಕ್ಷಣೆ

Monday, December 1st, 2008

ಇಂದು ಎಲ್ಲೆಡೆಯೂ ಜಲಸಂರಕ್ಷಣೆಯ ಮಾತು ಕೇಳಿಬರುತ್ತಿದೆ.  ಜಲಸಂರಕ್ಷಣೆ ಎಂದರೇನು? ಮುಂದಿನ ಪೀಳಿಗೆಗಳೂ ನಮ್ಮ ಹಾಗೆಯೇ ನೀರನ್ನು ಬಳಸುವುದಕ್ಕೆ ಅವಕಾಶ ಮಾಡಿಕೊಡುವುದೇ ಜಲಸಂರಕ್ಷಣೆ ಎಂದು ಸರಳವಾಗಿ ಹೇಳಬಹುದು.
ಜಲಸಂರಕ್ಷಣೆ ಯಾಕೆ ಬೇಕು? ನಮ್ಮ ಬದುಕಿನಲ್ಲಿ ನೀರಿಲ್ಲದೆ ಏನನ್ನೂ ಮಾಡಲಾಗುವುದಿಲ್ಲ. ಇಂಥ ನೀರೇ ಸಿಗದೆ ಹೋದರೆ ಬದುಕು ಬರಡಾಗುತ್ತದೆ. ನೀರಿಗಾಗಿ ಇಂದು ಎಲ್ಲೆಡೆ ಹಾಹಾಕಾರ ಕೇಳಿಬರುತ್ತಿದ.  ನಗರಗಳಲ್ಲಿ ನೀರಿನ ಸರಬರಾಜು ಅಸ್ತವ್ಯಸ್ತವಾಗುತ್ತಿದೆ. ಹಳ್ಳಿಗಳಲ್ಲಿ ಕುಡಿಯುವ ನೀರು ಸಿಗುತ್ತಿಲ್ಲ. ಇನ್ನು ಹೊಲಗದ್ದೆಗಳಿಗೆ ಬೇಕಾದ ನೀರಂತೂ ಸಿಗುವುದೇ ಕಷ್ಟವಾಗಿದೆ. 
ಹಾಗೆಂದು ನೀರು ಹೆಚ್ಚಾಗುತ್ತಲೂ ಇಲ್ಲ; ಕಡಿಮೆಯೂ [...]

ದೇಶ ಸುತ್ತು, ಕೋಶ ಓದು

Wednesday, November 5th, 2008

ದೇಶ ಸುತ್ತು ಕೋಶ ಓದು ಎನ್ನುವುದು ನಮ್ಮ ನಾಡಿನ ಹಿರಿಯರು ರೂಪಿಸಿದ ನಾಣ್ಣುಡಿ. ಈ ಮಾತು ನಮ್ಮ ದೇಶದ ಭವ್ಯ ಪರಂಪರೆಯನ್ನು  ಸೂಚಿಸುತ್ತದೆ. ಯಾಕೆಂದರೆ ದೇಶ ಸುತ್ತುವುದು ಎಂದರೆ ಪ್ರವಾಸ ಮಾಡುವುದು; ಕೋಶ ಓದು ಎಂದರೆ ಪುಸ್ತಕಗಳನ್ನು ಓದುವುದು. 
ದೇಶ ಸುತ್ತಿ ಕೋಶ ಓದುವ ಬಗ್ಗೆ ನಮ್ಮ ಹಿರಿಯರು ತಮ್ಮ ಅನುಭವದಿಂದಲೇ ಬರೆದಿದ್ದಾರೆ. ಕೋಶ ಓದಿ ಅಪಾರ  eನವನ್ನು ಸಂಪಾದಿಸಿದ  ಶಂಕಾರಾಚಾರ್ಯರು ಭಾರತದ ನಾಲ್ಕೂ ಮೂಲೆಗಳಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಪೀಠಗಳನ್ನು ಸ್ಥಾಪಿಸಿದರು; ಹಾಗೆಯೇ ನಮ್ಮ ತಂದೆಯ ಊರಿನ ಒಬ್ಬರು [...]

ಅಂಕಣಗಳು

ಹುದುಗಿದ್ದನ್ನು ಹುಡುಕಿ!

ಬನ್ನಿ, ಮಾತಾಡೋಣ!

ನೋಂದಾಯಿಸಿಕೊಳ್ಳಿ!

ಮಿತ್ರಮಾಧ್ಯಮದಲ್ಲಿ ಹೊಸ ಬರಹಗಳು ಪ್ರಕಟವಾದ ಬಗ್ಗೆ ತಿಳಿಯಲು ಇಲ್ಲಿ ನೋಂದಾಯಿಸಿ. ನಿಮ್ಮ ನೋಂದಾವಣೆ ಖಚಿತಪಡಿಸಿ ಒಂದು ಇ-ಮೈಲ್ ಕಳಿಸುತ್ತೇನೆ; ಗಮನಿಸಿ.

ಹೆಸರು
ಇಮೇಲ್