Archive for September, 2008

ಕ್ಯಾಸನೂರು ಕಾಡಿನಲ್ಲಿ ಮಲಗಿರುವ ಕೂಸಿಗೆ

Monday, September 15th, 2008
ಕ್ಯಾಸನೂರು ಕಾಡಿನಲ್ಲಿ ಮಲಗಿರುವ ಕೂಸಿಗೆ

ಶಿಲ್ಪಶ್ರೀ,
ಬ್ಲಾಗಿಂಗ್ ಬಗ್ಗೆ ಸ್ನಾತಕೋತ್ತರ ಪ್ರಬಂಧ ಬರೆಯಬೇಕಂದ್ರೆ ಶಿವಮೊಗ್ಗ ಶಂಕರಘಟ್ಟ ಅಂಥ ಒಳ್ಳೆಯ ಜಾಗವೇನಲ್ಲ. ಬ್ಲಾಗಿಂಗ್‌ನಂಥ ಇಂಟರ್‌ನೆಟ್ ಆಧಾರಿತ ವಿಷಯಾಭ್ಯಾಸ ಮಾಡಬೇಕಂದ್ರೆ ಬೆಂಗಳೂರಿನ ಸಂಪರ್ಕ ಇರಲೇಬೇಕು. ಕಲಿಯುವ ಜಾಗಕ್ಕೂ, ವಿಷಯಕ್ಕೂ ಸಂಬಂಧವೇ ಇರದಂಥ ಕಡೆಯಲ್ಲಿ ಇದ್ದ ನೀನು ಬ್ಲಾಗಿಂಗ್ ಬಗ್ಗೆ ಬರೆಯೋದಕ್ಕೆ ಹಒರಟು ನನಗೆ ಫೋನ್ ಮಾಡಿದಾಗ ನನಗೆ ಇನ್ನಿಲ್ಲದ ಅಚ್ಚರಿ; ಸಂತೋಷ. ಬೆಂಗಳೂರಿನ ಒಂದಷ್ಟು ಪರಿಣತರು ಬಂದು ಬ್ಲಾಗಿಂಗ್ ಬಗ್ಗೆ ಮಣಗಟ್ಟಳೆ ಭಾಷಣ ಮಾಡಿದ್ದರೂ ನಿನಗೆ ಬ್ಲಾಗಿಂಗ್ ಅರ್ಥವಾಗಿರಲಿಲ್ಲ ಎಂದು ನನಗೆ ನಿನ್ನ ಮಾತಿನ ಮೂಲಕ ಗೊತ್ತಾಯ್ತು.
ಅದಕ್ಕೇ [...]

ತಣ್ಣಗೆ ಮಲಗಿದೆ ರಸ್ತೆ

Friday, September 5th, 2008
ತಣ್ಣಗೆ ಮಲಗಿದೆ ರಸ್ತೆ

ಮಗು, ತಣ್ಣಗೆ ಮಲಗಿದೆ ರಸ್ತೆ, ಎಬ್ಬಿಸಬೇಡ.
ಭರ್ರನೆ ಬೀಸೋ ಗಾಳಿಗೆ ಬೀಗಬೇಡ. 
ಟಾರು ಗೀರುತ್ತ ಹಾಗೆ ರೊಯ್ಯನೆ ಹೋಗಬೇಡ. 
ಹೆದ್ದಾರಿಯಿದು. ನಗರದುದ್ದಕ್ಕೂ ಹರಿದಿರೋ ರಕ್ತನಾಳ
ಕೆಲವೊಮ್ಮೆ ಬಿಗಿಯಾಗಿ ಸುತ್ತುತ್ತೆ ನಮ್ಮನ್ನೆ. 
ಉಸಿರುಗಟ್ಟಿಸೋದಿರಲಿ, ಕಪಾಲವನ್ನೇ ಒಡೆದು
ಮೈಮೇಲೆ ಚೆಲ್ಲಿಕೊಳ್ಳುತ್ತೆ ಮಾಂಸ-ಮಜ್ಜನ.
 
 
ಮಗು, ತಣ್ಣಗೆ ಮಲಗಿದೆ ರಸ್ತೆ ಎಬ್ಬಿಸಬೇಡ. 
ಜಡೆ ಕಟ್ಟಿ ಕುಳಿತುಕೋ, ನಿನ್ನ ಝರಿ ಲಂಗ ಹುಷಾರು
ನಿನ್ನ ಕೊರಳೊಳಗೆ ಹರಿದಿರೋ ಸರ ಕೊಯ್ಯಬಹುದು
ಟಯರುಗಳು ಎಳೆದಾಡಿದರೆ. 
ನಿನ್ನೊಳಗೆ ಕ್ಷಣಮಾತ್ರ ಆತಂಕ ಹುಟ್ಟಿ ಕಣ್ಣು ತೆರೆದಂತೆಯೇ 
ನಿಂತೇಹೋಗುತ್ತೆ ಮಗು, ನಿನ್ನ ದಿನಚರಿ. 
ಶುರುವಾಗುತ್ತೆ ಪೋಲೀಸರ ಮಹಜರು. 
ಮಗೂ, ಈ ಊರು ಸ್ವಲ್ಪ ಭಾವವಿಕಲ
ಸಕಲವಿಕೃತಿಗಳ ಗೋಜಲು. ಹೂಗಿಡದ ತೋಟದ ಪಕ್ಕದಲ್ಲೇ 
ಹೊಸಕಿಹೋಗುತ್ತೆ [...]

ಶಿಕ್ಷಕರ ದಿನಾಚರಣೆ ಮತ್ತು ಗಾಂಧಿ ಜಯಂತಿ

Friday, September 5th, 2008

ಪ್ರತಿ ವರ್ಷದ ಸೆಪ್ಟೆಂಬರ್ ೫ರಂದು ನಾವು ಶಿಕ್ಷಕರ ದಿನವನ್ನು ಆಚರಿಸುತ್ತೇವೆ. ಅಂದು ನಾವೆಲ್ಲರೂ ನಮ್ಮ ಶಿಕ್ಷಕರಿಗೆ ನಮಿಸುತ್ತೇವೆ; ಶುಭಾಶಯ ಹೇಳುತ್ತೇವೆ. 
ನಮ್ಮ ದೇಶದ ರಾಷ್ಟ್ರಪತಿಯಾಗಿದ್ದ ಡಾ|| ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವನ್ನೇ ಶಿಕ್ಷಕರ ದಿನ ಎಂದು ಆಚರಿಸುತ್ತೇವೆ. ಶಿಕ್ಷಕರ ದಿನ ಎಂದರೆ ಅಂದು ಶಿಕ್ಷಕರು ಸಮಾಜಕ್ಕೆ ನೀಡುತ್ತಿರುವ ಸೇವೆಯನ್ನು  ಗುರುತಿಸಿ ಗೌರವಿಸುವ ದಿನ. 
ಅಂದು  ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯ ಹೇಳುತ್ತಾರೆ. ಹೂ ಗುಚ್ಛ ಕೊಟ್ಟು ನಮಸ್ಕರಿಸುತ್ತಾರೆ. ಈಗ ಹಲವು ಶಾಲೆಗಳಲ್ಲಿ ಶಿಕ್ಷಕರ ದಿನದಂದು ಮಕ್ಕಳು ಶಿಕ್ಷಕರಿಗಾಗಿ ಸಾಂಸ್ಕೃತಿಕ ಹಾಗೂ ಮನರಂಜನಾ [...]

ತದಡಿ: ಸರ್ಕಾರ, ಜನ, ನಾಯಕರು ಮಾಡಬೇಕಾದ್ದೇನು? ಇಲ್ಲಿದೆ ಕಾರ್ಯಸೂಚಿ

Monday, September 1st, 2008

ಕಳೆದ ವಾರ ಇದೇ ಅಂಕಣದಲ್ಲಿ ತದಡಿ ಯೋಜನೆಯ ಬಗ್ಗೆ ಲೇಖನ ಬಂದ ದಿನವೇ ನಾನು ತದಡಿಯಲ್ಲಿದ್ದೆ. ಅದಾಗಲೇ ತದಡಿಯ ಬಗೆಗಿನ ಎಲ್ಲ ಮಾಹಿತಿಯನ್ನೂ ಅಂತರಜಾಲದಲ್ಲಿ ಪಾತಾಳಗರಡಿ ಹಾಕಿ ಹುಡುಕಿ ತೆಗೆದು ಓದಿದ್ದೆ. ತದಡಿಯಲ್ಲಿ ಯೋಜನೆಯ ಪರ, ವಿರೋಧ ಇರುವ ಕೆಲವರನ್ನು ಭೇಟಿಯಾದೆ. ಪತ್ರಕರ್ತ ಮಿತ್ರರ ಜೊತೆ ಚರ್ಚಿಸಿದೆ. ಮುಖ್ಯವಾಗಿ ತದಡಿಯ ಈಗಿನ ವಿವಾದಿತ ಅಭಿವೃದ್ಧಿ ಮೀಸಲು ಜಾಗವನ್ನೂ ನೋಡಿದೆ. ಅದರ ಮೇಲೆ ಓಡಾಡಲಾಗಲಿಲ್ಲ; ಯಾಕೆಂದರೆ ಅದೆಲ್ಲವೂ ಗಜನಿ ಭೂಮಿ. ನೀರು ಏರುತ್ತ, ಇಳಿಯುತ್ತ ಹೋಗುತ್ತದೆ. ನುಸಿಕೋಟೆಯ ಜನರು [...]

ತದಡಿಗೆ ಬರುತ್ತಿದ್ದಾರೆ: ವಸುಂಧರೆಯ ಒಡಲಿಗೇ ಬಹುಬಾಂಬ್ ಇಡುವವರು!

Monday, September 1st, 2008

`ನಮ್ಮ ಬಳಿ ಡಾಟಾ ಇಲ್ಲ. ಈ ಬಗ್ಗೆ ಒಂದು ವಿಶ್ವಸ್ತರದ ಸಂಸ್ಥೆಯ ಮೂಲಕ ಅಧ್ಯಯನ ಮಾಡಿಸುತ್ತೇವೆ’
ವಿಕಾಸಸೌಧದ ಆ ಸುಸಜ್ಜಿತ ಕೋಣೆಯಲ್ಲಿ ಕುಳಿತ ರಾಜ್ಯ ಸರ್ಕಾರದ ಇಂಧನ ಇಲಾಖೆಯ ಕಾರ್ಯದರ್ಶಿಯವರು ಖಚಿತವಾಗಿ ಹೇಳಿದರು.
`ಹಾಗೆ ಅಧ್ಯಯನ ಮಾಡುವ ಅಗತ್ಯವಿಲ್ಲ. ಸುಮ್ಮನೆ ಅದಕ್ಕೆ ಯಾಕೆ ಹಣ ಖರ್ಚು ಮಾಡುತ್ತೀರಿ…. ನಾವಂತೂ ತದಡಿಗೆ ಇಂಥ ಯಾವುದೇ ಯೋಜನೆ ಬರುವುದಕ್ಕೆ ಬಿಡುವುದಿಲ್ಲ’ ಎಂದು ತದಡಿಯಿಂದ ಬಂದಿದ್ದ ಹಿರಿಯರೊಬ್ಬರು ನಸುನಗುತ್ತ ನುಡಿದರು.

ವರ್ತಮಾನದ ಹೊಸ ವಾರ್ತೆಗಳು

Monday, September 1st, 2008

ಕಲಿಯುಗ ಅಂಕಣ ಶುರುವಾಗಿ ಒಂದು ವರ್ಷ ಕಳೆದೇ ಹೋಗಿದೆ! ನನ್ನ ಅಂಕಣದ ನೀತಿಯನ್ನೇ ಮೊದಲ ಲೇಖನವಾಗಿ ಬರೆದಿದ್ದೆ. ಬಹುಶಃ ಅವೆಲ್ಲವನ್ನೂ ಪೂರೈಸಲು ಸಾಧ್ಯವಾಗಿಲ್ಲದಿರಬಹುದು; ಆದರೆ ಹಲವು ಬಾರಿ ರಾಜಕೀಯ ಮತ್ತು ವಿವಾದಾಸ್ಪದ ವಿಷಯಗಳ ಬಗ್ಗೆ ಬರೆಯುವ ಒತ್ತಡ ಒಳಗೊಳಗೇ ಮೂಡಿದ್ದರೂ, ಅವುಗಳನ್ನು ಮೀರಿ ನನ್ನ ಅಂಕಣದ ನೀತಿಯನ್ನು ಪಾಲಿಸಿದ್ದೇನೆ ಎಂಬ ಸಮಾಧಾನ ನನಗಿದೆ. ಈ ವರ್ಷ ಬರೆದ ಹಲವು ಲೇಖನಗಳು ಸಾಧಾರಣ ಮಟ್ಟದವು, ಕೆಲವು ಮಾತ್ರ ಹೆಚ್ಚು ಮಾಹಿತಿಪೂರ್ಣವಾಗಿದ್ದವು ಎಂಬ ಅರಿವೂ ನನಗಿದೆ. ಏನೇ ಇರಲಿ, ಓದುಗರಿಗೆ, [...]

ಅಂಕಣಗಳು

ಹುದುಗಿದ್ದನ್ನು ಹುಡುಕಿ!

ಬನ್ನಿ, ಮಾತಾಡೋಣ!

ನೋಂದಾಯಿಸಿಕೊಳ್ಳಿ!

ಮಿತ್ರಮಾಧ್ಯಮದಲ್ಲಿ ಹೊಸ ಬರಹಗಳು ಪ್ರಕಟವಾದ ಬಗ್ಗೆ ತಿಳಿಯಲು ಇಲ್ಲಿ ನೋಂದಾಯಿಸಿ. ನಿಮ್ಮ ನೋಂದಾವಣೆ ಖಚಿತಪಡಿಸಿ ಒಂದು ಇ-ಮೈಲ್ ಕಳಿಸುತ್ತೇನೆ; ಗಮನಿಸಿ.

ಹೆಸರು
ಇಮೇಲ್